ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಸಚಿವ ಬಿ.ಶ್ರೀರಾಮುಲು ಹಾಗೂ ಡಾ.ಕೆ. ಸುಧಾಕರ್ ಅವರೊಂದಿಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಸಚಿವದ್ವಯರನ್ನು ಕೂರಿಸಿ ಮುಖಾಮುಖಿ ಮಾತನಾಡಲು ಯಡಿಯೂರಪ್ಪ ಮುಂದಾಗಿದ್ದಾರೆ.
ನಿನ್ನೆ ಬಿಎಸ್ವೈ, ಮೂವರು ಸಚಿವರ ಖಾತೆ ಬದಲಾವಣೆ ಮಾಡಿದ್ದರು. ಡಿಸಿಎಂ ಗೋವಿಂದ ಕಾರಜೋಳ ಅವರ ಬಳಿ ಹೆಚ್ಚುವರಿಯಾಗಿದ್ದ ಸಮಾಜ ಕಲ್ಯಾಣ ಖಾತೆಯನ್ನ ಶ್ರೀರಾಮುಲು ಅವರಿಗೆ ನೀಡಿದ್ರು. ಹಾಗೇ ಶ್ರೀರಾಮುಲು ಅವರ ಬಳಿಯಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಜವಾಬ್ದಾರಿಯನ್ನ ಸುಧಾಕರ್ ಅವರಿಗೆ ವಹಿಸಿದ್ದರು. ಆರೋಗ್ಯ ಖಾತೆ ಕೈತಪ್ಪಿದ ಹಿನ್ನೆಲೆ ಶ್ರೀರಾಮುಲು ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಮಾತುಗಳು ಕೂಡ ಕೇಳಿಬಂದಿವೆ.