ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ : ಡಿಕೆ ಶಿವಕುಮಾರ್ ಹೇಳಿಕೆ.

ಚಿತ್ರದುರ್ಗ : ಸಿಬಿಐ ಸಮನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಸಿಬಿಐ ನೋಟಿಸ್ ನೀಡಲಾಗಿದ್ದು, ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಡಿ‌ಕೆ. ಶಿವಕುಮಾರ್ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ ಸಿಬಿಐ ಸಮನ್ಸ್ ವಿಚಾರಕ್ಕೆ ಡಿಕೆಶಿ ಪ್ರತಿಕ್ರಿಯೆ ನೀಡಿದರು. ನಾನು ಮಂತ್ರಿಯಾದಾಗ, ಕಳೆದ 30 ವರ್ಷ ರಾಜಕಾರಣ ದಲ್ಲಿ, ನನ್ನ ಮೇಲೆ ಯಾವುದೇ ಆರೋಪ ಇಲ್ಲ, ಕಮಿಷನ್ ತನಿಖೆಗೆ ಯಾವುದೂ ಇಲ್ಲ. ಮಾಡಿರುವ ತನಿಖೆಗಳೆಲ್ಲವೂ ಕೂಡಾ ಕ್ಲೋಸ್ ಆಗಿವೆ ಎಂದರು. ಆದಾಯಕ್ಕಿಂತ ಆಸ್ತಿ ಜಾಸ್ತಿಯಾಗಿದೆ ಎಂದು ಕರ್ನಾಟಕದಲ್ಲಿ ಒಂದೇ ಒಂದು ಕೇಸ್ ಸಿಬಿಐಗೆ ನೀಡಿದ್ದಾರೆ. ದಾಳಿ ಮಾಡಿದ್ದರು, ಈಗ ಸಮನ್ಸ್ ನೀಡಿದ್ದಾರೆ, ಕಾನೂನಿಗೆ ಗೌರವ ನೀಡಿ ಉತ್ತರ ನೀಡುತ್ತೇನೆ ಎಂದು ತಿಳಿಸಿದರು.

ಕಾಂಗ್ರೆಸ್ ದೇಶ ವಿರೋಧಿ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ ಹೆಲಗ ಮೇಲಿನ ಶಾಲು ತೋರಿಸಿ ಇದು ಬಾವುಟ. ಕಾಂಗ್ರೆಸ್ ನವರಿಗೆ ಮಾತ್ರ ಇದು ಇರುವುದು ಬೇರೆ ಯಾರಿಗೂ ಇಲ್ಲ ಇದೊಂದೆ ಉತ್ತರ ಎಂದು ಸಂಸದ ಪ್ರಹ್ಲಾದ್ ಜೋಶಿಗೆ ತಿರುಗೇಟು ನೀಡಿದರು. ಇನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಕೈ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ
ಲಕ್ಷ್ಮಿ ಹೆಬ್ಬಾಳ್ಕರ್& ಸತೀಶ್ ಜಾರಕಿಹೊಳಿ ಟಿಕೇಟ್ ಗಾಗಿ ಪೈಟ್ ವಿಚಾರ ಮಾತನಾಡಿದ ಅವರು ಇದು ನನಗೆ ಗೊತ್ತಿಲ್ಲ ನೋಡೋಣ ಎಂದು ಡಿಕೆ ಶಿವಕುಮಾರ್ ಹೇಳಿದರು.

Leave a Reply

Your email address will not be published.

Send this to a friend