ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ: ನಂದಿ ಧ್ವಜಕ್ಕೆ ಸಿಎಂ ಬಿಎಸ್‌ವೈ ಪೂಜೆ.

ಮೈಸೂರು: ಸಂಭ್ರಮದ ಕ್ಷಣಗಳಿಗೆ ಮೈಸೂರು ಸಾಕ್ಷಿಯಾಗಿದ್ದು, ಮೈಸೂರು ದಸರಾ ಜಂಬೂ ಸವಾರಿ ಹಿನ್ನೆಲೆಯಲ್ಲಿ ನಂದಿ ಧ್ವಜಕ್ಕೆ ಸಿಎಂ ಬಿಎಸ್ವೈ ಪೂಜೆ ಸಲ್ಲಿಸಿದರು. ಈ ಮೂಲಕ, ಜಂಬೂ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದ್ದು,
ಮಧ್ಯಾಹ್ನ 2.59ರಿಂದ 3.20ರ ಶುಭ ಮಕರ ಲಗ್ನದಲ್ಲಿ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಜೋಡಿ ನಂದಿ ಧ್ವಜಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಪೂಜೆ ಸಲ್ಲಿಸಿದರು. ಈ ವೇಳೆ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಸರಳ ದಸರಾ ಆಚರಣೆ ಮಾಡಲಾಗುತ್ತಿದೆ. ಈ ಬಾರಿ ಕೊರೊನಾ ಸೋಂಕಿನಿಂದ ಬಂಧಿತರಾಗಿದ್ದಾರೆ. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ತಿಳಿಸಿದರು.
ಕೊರೊನಾ ವೈರಸ್ ಮುನ್ನೆಚ್ಚರಿಕೆ ನಡುವೆ, ಸಾಮಾಜಿಕ ಅಂತರ ಹಾಗೂ ಮಾಸ್ಕ್ ಸಮೇತ ಸಿಎಂ ಹಾಗೂ ಸಚಿವರು ನಂದಿ ಧ್ವಜ ಪೂಜೆಯಲ್ಲಿ ಭಾಗಿಯಾಗಿದ್ದರು.

Leave a Reply

Your email address will not be published.

Send this to a friend