ಬೆಂಗಳೂರು: ಸೆಪ್ಟೆಂಬರ್ 21ರಿಂದ ಕೇವಲ ಶಾಲೆ ತೆರಯಲಿದೆ ಆದರೆ ಯಾವುದೇ ತರಗತಿ ಪ್ರಾರಂಭಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. ಮೈಸೂರು ನಗರದಲ್ಲಿ “ಕೇಂದ್ರ ಗ್ರಂಥಾಲಯ ಉದ್ಘಾಟನೆ” ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆ.30ರೊಳಗೆ ದಾಖಲಾತಿ ಪ್ರಕ್ರಿಯೆ ಮುಗಿಬೇಕು. 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿ ಮುಗಿಬೇಕು ಎಂದು ತಿಳಿಸಿದರು. ಇನ್ನು ಕೇವಲ ಒಂದು ಟರ್ಮ್ ಫೀಸ್ ಮಾತ್ರ ಖಾಸಗಿ ಶಾಲೆ ಪಡೆಯಬೇಕು. ಆಗೊಮ್ಮೆ ಸಮಸ್ಯೆ ಆದರೆ ಅಲ್ಲಿನ ಡಿಡಿಪಿಐ, ಬಿಇಓ ಈ ಬಗ್ಗೆ ಕ್ರಮ ಕೈಗೊಳ್ತಾರೆ. ಅವರಿಗೆ ಈಗಾಗಲೇ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ. ಯಾವುದೇ ಪೋಷಕರಿಗೆ ಇದರಿಂದ ಸಮಸ್ಯೆ ಆದರೆ ಬಿಇಓ ಸಂಪರ್ಕಿಸಿ ಎಂದು ಸಚಿವರು ತಿಳಿಸಿದರು.